ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಮೆಂಟ್: ಪೊಲೀಸ್ ಸಿಬ್ಬಂದಿ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾಮಾಜಿಕ ಜಾಲತಾಣದಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಮೆಂಟ್ ಮಾಡಿದ್ದ ಹಿನ್ನೆಲೆಯಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.

ವಿ.ವಿ. ಪುರಂ ಟ್ರಾಫಿಕ್ ಪೊಲೀಸ್ ಠಾಣೆ ಮುಖ್ಯ ಪೇದೆ ಬಿ. ಪ್ರಕಾಶ್‌ ಅಮಾನತಾಗೊಳಗಾದವರು.

ಸಾಮಾಜಿಕ ಮಾಧ್ಯಮದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದು, ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಹಾಕಲಾಗಿದ್ದ ಕಮೆಂಟ್ ಸ್ಕ್ರೀನ್ ಶಾಟ್ ತೆಗೆದುಕೊಂಡು ಪೇದೆ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು. ಈ ಕುರಿತು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಿ ಕ್ರಮ ತೆಗೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!