ರೈತ ಮಹಿಳೆಯೊಂದಿಗೆ ಪೊಲೀಸರ ದುರ್ವರ್ತನೆ, ಜುಟ್ಟು ಹಿಡಿದು ಎಳೆದೊಯ್ದು ದರ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮ್ಮ ಜಮೀನಿನಲ್ಲಿ ವಿದ್ಯುತ್ ಟವರ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯನ್ನು ಪೊಲೀಸರು ಜುಟ್ಟು ಹಿಡಿದು ಎಳೆದಾಡಿದ ಘಟನೆ ಮಧ್ಯಪ್ರದೇಶದ ನಡೆದಿದೆ.

ಕಟ್ನಿ ಜಿಲ್ಲೆಯ ಕೌರಿಯಾದ ಮಹಿಳೆ ಚೈನಾ ಬಾಯ್ ಕಚಿ ಅವರ ಸ್ಥಳದಲ್ಲಿ ಅಧಿಕಾರಿಗಳು ವಿದ್ಯುತ್ ಟವರ್ ಅನ್ನು ಸ್ಥಾಪಿಸುತ್ತಿದ್ದಾರೆ. ಯಾವುದೇ ಪರಿಹಾರ ನೀಡದೆ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಹೀಗಾಗಿ ಆಕೆ ತನ್ನ ಸಂಬಂಧಿಕರೊಂದಿಗೆ ಸೇರಿ ಟವರ್ ನಿರ್ಮಾಣ ಕಾರ್ಯಕ್ಕೆ ಅಡ್ಡಪಡಿಸಿದ್ದು, ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಬಂದು ಆಕೆಯ ಜುಟ್ಟು ಹಿಡಿದು ಎಳೆದೊಯ್ದಿದ್ದಾರೆ. ಈ ಘಟನೆಯನ್ನು ಅಲ್ಲಿದ್ದವರು ತಮ್ಮ ಫೋನ್‌ಗಳಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.

ಇದು ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯಿಸಿ, ಟವರ್ ನಿರ್ಮಾಣ ಕಾಮಗಾರಿಗೆ ಅಡ್ಡಿಪಡಿಸಿದ್ದಕ್ಕಾಗಿ ಆಕೆಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮನೋಜ್ ಕೆಡಿಯಾ ತಿಳಿಸಿದ್ದಾರೆ. ಕಾನೂನು ಪ್ರಕಾರ ನಡೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ವೀಡಿಯೋ ಹಳೆಯದು ಎಂದು ಹೇಳಲಾಗಿದೆ.

ಪರಿಹಾರ ನೀಡದೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂತ್ರಸ್ತೆ ಅಳಲು ತೋಡಿಕೊಂಡರು. ಗುತ್ತಿಗೆದಾರರು, ವಿದ್ಯುತ್ ಕಂಪನಿ, ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ತಮ್ಮ ಜಮೀನನ್ನು ಒತ್ತುವರಿ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!