ಪೊಲೀಸರ ಮೇಲೆ ಹಲ್ಲೆಗೆ ಯತ್ನ, ರೌಡಿಶೀಟರ್‌ ಕಾಲಿಗೆ ಗುಂಡೇಟು

ಹೊಸದಿಗಂತ ವರದಿ ಶಿವವೊಗ್ಗ:

ವ್ಯಕ್ತಿಯೊಬ್ಬರಿಗೆ ಹಣ ನೀಡುವಂತೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆಯೇ ರೌಡಿ ಶೀಟರ್‌ ದಾಳಿ ನಡೆಸಿದ್ದಾನೆ. ಆತ್ಮ ರಕ್ಷಣೆಗಾಗಿ ಪೊಲೀಸರು ರೌಡಿಶೀಟರ್‌ ಕಾಳಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ. ಬುದ್ದನಗರದ ಹರ್ಷದ್ ಯಾನೆ ಜಾಮೂನ್ (30) ಬಂಧಿತ ಆರೋಪಿಯಾಗಿದ್ದು, ಇತ್ತೀಚೆಗೆಷಟೇ ಬೇಲ್ ಮೇಲೆ ಹೊರ ಬಂದಿದ್ದ. ಹೊರಬಂದು ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾನೆ.

ಜೂ.1 ರಂದು ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತನ ಬಂಧನಕ್ಕೆ ತೆರಳಿದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದಾಗಿ ತುಂಗಾ ನಗರ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ ಸರ್ವೀಸ್ ಪಿಸ್ತೂಲ್‌ನಿಂದ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈತನ ಮೇಲೆ ಮಾರಣಾಂತಿಕ ಹಲ್ಲೆ, ಮನೆಗಳ್ಳತನ ಮತ್ತು ದರೋಡೆ ಪ್ರಕರಣಗಳು ಸೇರಿದಂತೆ 5 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಕೋಟೆ ಪೊಲೀಸ್ ಠಾಣೆಯ ಮಾರಣಾಂತಿಕ ಹಲ್ಲೆ ಪ್ರಕರಣವೊಂದರಲ್ಲಿ 10-07-2017 ರಂದು ನ್ಯಾಯಾಲಯವು ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಆರೋಪಿಯು ಸರ್ವೋಚ್ಚ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದು ತನ್ನ ಕೃತ್ಯ ಮುಂದುವರಿಸಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!