ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜ ವಿರೋಧಿ ಚಟುವಟಿಕೆ ಆರೋಪ ಮೇರೆಗೆ ಪಿಎಫ್ಐ ನಾಯಕರ ಹಾಗೂ ಕಚೇರಿಗಳ ಮೇಲೆ ಎನ್ಐಎ ದಾಳಿ ಬೆನ್ನೆಲ್ಲೇ ರಾಜ್ಯದೆಲ್ಲೆಡೆ 19 ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿ ಬೆಂಗಳೂರಿನಲ್ಲಿ ಇಬ್ಬರು ಸೇರಿ 15 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಹಿಂದೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪಿಎಫ್ಐ ಸಂಘಟನೆಯು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದೇ ಆಧಾರದ ಮೇರೆಗೆ ಕಾರ್ಯಾಚರಣೆ ಕೈಗೊಂಡ ಪೂರ್ವ ವಿಭಾಗ ಹಾಗೂ ಸಿಸಿಬಿಯು ಮನ್ಸೂರ್ ಹಾಗೂ ಯಾಸೀನ್ ಎಂಬುವರನ್ನು ವಶಕ್ಕೆ ಪಡೆದುಕೊಂಡಿದೆ.
ಮೈಸೂರು, ಮಂಗಳೂರು, ಶಿವಮೊಗ್ಗ ಹಾಗೂ ಕಲಬುರಗಿ 9 ಜಿಲ್ಲೆಗಳಲ್ಲಿ ದಾಳಿ ನಡ್ದೆಸಲಾಗಿದ್ದು, ಸೇರಿದಂತೆ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.