ನೇಣು ಬಿಗಿದುಕೊಂಡು ಪೊಲೀಸ್‌ ಸಿಬ್ಬಂದಿ ಆತ್ಮಹತ್ಯೆಗೆ ಶರಣು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪೊಲೀಸ್‌ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಪ್ರಕಾಶ್ ನಾಯ್ಕ್(25) ಆತ್ಮಹತ್ಯೆ ಮಾಡಿಕೊಂಡ ಡಿಎಆರ್ ಕಾನ್ಸ್​ಟೇಬಲ್.

ಡಿಎಆರ್ ಪೊಲೀಸ್ ಹೆಡ್ ಕ್ವಾಟರ್ಸ್‌ನಲ್ಲಿ ನೇಣಿಗೆ ಶರಣಾಗಿದ್ದು, ಸಿಸಿಟಿ (ಭಯೋತ್ಪಾದನೆ ನಿಗ್ರಹ ತರಬೇತಿ) ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಪ್ರಕಾಶ್ ಕಳೆದೊಂದು ವರ್ಷದ ಹಿಂದೆ‌ಯಷ್ಟೇ ಇಲಾಖೆಗೆ ಸೇರಿದ್ದರು. ಅವರು ಅವಿವಾಹಿತರಾಗಿದ್ದು, ಇದೀಗ ಸಾವನ್ನಪ್ಪಿದ್ದಾರೆ. ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!