February 21, 2026
Saturday, February 21, 2026
spot_img

ಪತಿ ಸಾವಿನ ಬಳಿಕ ಪೊಲೀಸ್‌ ಸಿಬ್ಬಂದಿ ಕಾಟ: ಬೇಸರದಿಂದ ಪ್ರಾಣಬಿಟ್ಟ ಪತ್ನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪತಿ ಸಾವಿನ ಬಳಿಕ ಪೇದೆ ನೀಡುತ್ತಿದ್ದ ಕಿರುಕುಳ, , ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಅಪಪ್ರಚಾರ ತಾಳಲಾಗದೇ ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ವಾಟ್ಸಪ್‌ನಲ್ಲಿ ಡೆತ್‌ನೋಟ್‌ನಲ್ಲಿ ಪತ್ತೆಯಾಗಿದ್ದು, ಪೇದೆ ಮೋಹನ್ ಕಾಟ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ.

ಮೃತ ಸ್ವಾತಿ ಹಾಗೂ ಜಗದೀಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಎರಡು ಹೆಣ್ಣು ಮಕ್ಕಳಿದ್ದರು. ಜಗದೀಶ್ ತಂದೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಅನುಕಂಪದ ಆಧಾರದ ಮೇಲೆ ಜಗದೀಶ್‌ಗೆ ಕೆಲಸ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳಿಂದ ಕೆಎಸ್‌ಐಎಸ್‌ಎಫ್‌ನಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು.

ಫೆ.14ರಂದು ಕರ್ತವ್ಯ ನಿಮಿತ್ತ ಜಗದೀಶ್ ಚಿತ್ರದುರ್ಗಕ್ಕೆ ಹೋಗಿ ಬಂದಿದ್ದರು. ರಾತ್ರಿ 9 ಗಂಟೆ ಮನೆಗೆ ಬಂದು ಅಡುಗೆ ಮಾಡುವಂತೆ ಪತ್ನಿಗೆ ತಿಳಿಸಿ ಮಹಡಿ ಮೇಲಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅತಿಯಾದ ಮದ್ಯ ಸೇವನೆ, ಹೊಟ್ಟೆ ನೋವಿನಿಂದ ಜಗದೀಶ್ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಶಂಕಿಸಿದ್ದರು.


Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !