ಹೊಸದಿಗಂತ ಡಿಜಿಟಲ್ ಡೆಸ್ಕ್
ಸ್ಕಾಟ್ಲೆಂಡ್ನ A828 ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಸೇರಿದಂತೆ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ.
ಸ್ಕಾಟಿಷ್ ಹೈಲ್ಯಾಂಡ್ಸ್ನ ಅರ್ಗಿಲ್ನ ಅಪ್ಪಿನ್ ಪ್ರದೇಶದಲ್ಲಿ ಈ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸಿದೆ. ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದ ಏರೋನಾಟಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ಬೆಂಗಳೂರಿನ ಗಿರೀಶ್ ಸುಬ್ರಹ್ಮಣ್ಯಂ (23), ಹೈದರಾಬಾದ್ನ ಪವನ್ ಬಶೆಟ್ಟಿ ಮತ್ತು ವಿವಿಯ ಮಾಜಿ ವಿದ್ಯಾರ್ಥಿ ಮತ್ತು ಅವರ ಸ್ನೇಹಿತ, ಆಂಧ್ರಪ್ರದೇಶದ ನೆಲ್ಲೂರು ಮೂಲದ 30 ವರ್ಷದ ಸುಧಾಕರ್ ಮೊಡೆಪಲ್ಲಿ ಅವರು ತಮ್ಮ ಹೋಂಡಾ ಸಿವಿಕ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಗೂಡ್ಸ್ ವಾಹನವೊಂದು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಇವರ ಜೊತೆಗಿದ್ದ ಹೈದರಾಬಾದ್ನ ಸಾಯಿ ವರ್ಮಾ (24) ಅವರು ಗಂಭೀರ ಗಾಯಗಳೊಂದಿಗೆ” ಆಸ್ಪತ್ರೆಯಲ್ಲಿದ್ದಾರೆ.
ರಸ್ತೆ ಸಂಚಾರ ಅಪರಾಧಕ್ಕೆ ಸಂಬಂಧಿಸಿದಂತೆ 47 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಸ್ಕಾಟ್ಲೆಂಡ್ ಪೊಲೀಸರು ತಿಳಿಸಿದ್ದಾರೆ. ಸ್ಕಾಟ್ಲೆಂಡ್ನಲ್ಲಿರುವ ಭಾರತೀಯ ಸಮುದಾಯ ಮತ್ತು ಇಂಡಿಯನ್ ನ್ಯಾಷನಲ್ ಸ್ಟೂಡೆಂಟ್ಸ್ ಅಸೋಸಿಯೇಷನ್ (INSA) ಮೃತರ ಕುಟುಂಬಗಳಿಗೆ ಸಹಾಯ ಮಾಡಲು ಒಟ್ಟುಗೂಡಿದೆ. ಸ್ಕಾಟ್ಲೆಂಡ್ನಲ್ಲಿರುವ ಭಾರತೀಯ ದೂತಾವಾಸವು ಮರಣೋತ್ತರ ಪರೀಕ್ಷೆಯ ಕಾರ್ಯವಿಧಾನಗಳನ್ನು ಅನುಸರಿಸುತ್ತಿದ್ದು, ಮೃತರ ದೇಹವನ್ನು ಭಾರತಕ್ಕೆ ವಾಪಸು ಕಳುಹಿಸುವ ಪ್ರಯತ್ನದಲ್ಲಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ