ಹೊಸದಿಗಂತ ಡಿಜಿಟಲ್ ಡೆಸ್ಕ್
ಮಹಾರಾಷ್ಟ್ರದ ಸರ್ಕಾರದ ವಿರುದ್ಧ ಬಂಡಾಯ ಎದ್ದು ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿವಸೇನೆಯ ಏಕನಾಥ್ ಶಿಂಧೆ ಬಣದ ಶಾಸಕರನ್ನ ಅಸ್ಸಾಂ ಬಿಜೆಪಿ ಸಚಿವರು ಭೇಟಿ ಮಾಡಿದ್ದಾರೆ.
ಬಂಡಾಯ ಶಾಸಕರೊಂದಿಗೆ ಅಸ್ಸಾಂ ನ ಬಿಜೆಪಿ ಸಚಿವರು ಸರಣಿ ಸಭೆಗಳನ್ನು ನಡೆಸಿದ್ದು, ಈ ಮೂಲಕ ಮಹಾರಾಷ್ಟ್ರದಲ್ಲಿ ಬಿಜೆಪಿ ಬಂಡಾಯ ಶಾಸಕರ ಜೊತೆಗೂಡಿ ಸರಕಾರ ರಚಿಸಲು ರಣತಂತ್ರ ರೂಪಿಸುತ್ತಿದೆ.
ಎರಡು ದಿನಗಳ ಅವಧಿಯಲ್ಲಿ ಅಸ್ಸಾಂ ನ ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಸಿಂಘಾಲ್ ಮೂರನೇ ಬಾರಿಗೆ ಶಾಸಕರನ್ನು ಭೇಟಿಮಾಡಿ ಚರ್ಚೆ ನಡೆಸಿದ್ದಾರೆ.
ಈ ನಡುವೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಸಿಲ್ಚಾರ್ ನಲ್ಲಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ವಿಮಾನ ನಿಲ್ದಾಣದಿಂದ ವಾಪಸ್ಸಾಗುತ್ತಿದ್ದ ವೇಳೆ ಅಸ್ಸಾಂ ನಲ್ಲಿ ಬಂಡಾಯ ಶಾಸಕರಿರುವ ಗೋಟಾನಗರ್ ಪ್ರದೇಶಲ್ಲಿನ ರ್ಯಾಡಿಸನ್ ಬ್ಲೂ ಹೋಟೆಲ್ ನ ಮುಂಭಾಗದಲ್ಲಿ ಕಾರನ್ನು ನಿಲ್ಲಿಸಿ ಪತ್ರಕರ್ತರನ್ನು ಮಾತನಾಡಿಸಿದ್ದರು.