ಕಾಂಗ್ರೆಸ್ ಗೆ ನುಂಗಲಾರದ ತುತ್ತಾಡ ರಾಜಸ್ಥಾನದ ರಾಜಕೀಯ ಬಿಕ್ಕಟ್ಟು: ಕಮಲ್​ನಾಥ್​ಗೆ ಬಂತು ಹೈಕಮಾಂಡ್​ ಬುಲಾವ್​!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ತಲೆನೋವು ಆಗಿದ್ದು, ಇದರಿಂದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇನ್ನಟ್ಟು ಜಟಿಲವಾಗುತ್ತಿದೆ.”

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ತಪ್ಪಿಸುವ ಸಲುವಾಗಿ ಶಾಸಕರಿಂದ ಒತ್ತಡ ಕೇಳಿಬಂದಿದೆ. ಈ ಮಧ್ಯೆಯೇ ಮಧ್ಯಪ್ರದೇಶ ಕಾಂಗ್ರೆಸ್​ ಹಿರಿಯ ನಾಯಕ ಕಮಲ್​ನಾಥ್​ ಅವರನ್ನು ಹೈಕಮಾಂಡ್​ ದೆಹಲಿಗೆ ಕರೆಸಿರುವುದು ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

ಭಾರೀ ಒತ್ತಡದ ಮೇಲೆ ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷರಾಗಲು ಒಪ್ಪಿಕೊಂಡಿದ್ದರು. ಸಿಎಂ ಸ್ಥಾನವನ್ನು ಅವರ ಸಚಿನ್​ ಪೈಲಟ್​ ಅವರಿಗೆ ನೀಡುವ ಕುರಿತಾಗಿ ಮಾತುಗಳು ಕೇಳಿ ಬಂದ ತಕ್ಷಣವೇ 92 ಗೆಹ್ಲೋಟ್​ ಬಣದ ಶಾಸಕರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಲು ಮುಂದಾಗಿದ್ದರು.ಇದು ಕಾಂಗ್ರೆಸ್​ ಹೈಕಮಾಂಡ್​ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ಸಂದಿಗ್ಧತೆಯನ್ನು ಕಳೆಯಲು ಸೋನಿಯಾ ಗಾಂಧಿ ಅವರು ಕಮಲ್​ನಾಥ್ ಅವರನ್ನು ದೆಹಲಿಗೆ ಕರೆಯಿಸಿಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವರನ್ನು ಸ್ಪರ್ಧಿಸುವಂತೆ ಹೈಕಮಾಂಡ್​ ಅವರನ್ನು ಕೋರುವ ಸಾಧ್ಯತೆ ಇದೆ.

ಗಾಂಧಿ ಕುಟುಂಬದ ಆಪ್ತರಲ್ಲಿ ಒಬ್ಬರಾಗಿದ್ದ ಸಂಸದ ಕಮಲ್​ನಾಥ್​ ಅವರು ಈ ಹಿಂದೆಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಲು ನಿರಾಕರಣೆ ಮಾಡಿದ್ದರು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಉತ್ತಮ ಜನಸ್ಪಂದನೆ ಸಿಗುತ್ತಿದೆ. ಹೀಗಾಗಿ ತಾವು ರಾಜ್ಯದಲ್ಲಿಯೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದು ಅವರು ಹೇಳಿಕೆ ನೀಡಿದ್ದರು.

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ಗಾಂಧಿ ಕುಟುಂಬವೇ ಕೇಳಿಕೊಂಡಿದೆ. 2 ದಶಕಗಳ ಬಳಿಕ ಗಾಂಧಿಯೇತರ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶುರುವಾದ ಮಧ್ಯೆಯೇ ರಾಜಸ್ಥಾನದಲ್ಲಿ ಶಾಸಕರ ಮುನಿಸಿನಿಂದ ಸರ್ಕಾರ ಪತನವಾಗುವ ಸಾಧ್ಯತೆ ಇದೆ.ಇದನ್ನು ತಡೆಯಲು ಗೆಹ್ಲೋಟ್​ ಅವರ ಬದಲಾಗಿ ಹಿರಿಯ ನಾಯಕ ದಿಗ್ವಿಜಯ್​ ಸಿಂಗ್​ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಕಮಲ್​ನಾಥ್​ ಅವರು ಸೂಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!