April 28, 2026
Tuesday, April 28, 2026
spot_img

‘ಗ್ಯಾಸ್ ಟ್ರಬಲ್‌’ ಮಧ್ಯೆ ರಾಜಕೀಯ ಗುದ್ದಾಟ: ಪಕ್ಷಗಳ ನಡುವೆ ಆರೋಪ–ಪ್ರತ್ಯಾರೋಪಗಳ ವಾಕ್ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಇದೀಗ ಕರ್ನಾಟಕದಲ್ಲೂ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಅಡುಗೆ ಅನಿಲ ಸರಬರಾಜು ಸಮಸ್ಯೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ಆರೋಪ–ಪ್ರತ್ಯಾರೋಪ ಜೋರಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಗ್ಯಾಸ್ ಬೆಲೆ ಏರಿಕೆ ಮತ್ತು ಸರಬರಾಜು ಸಮಸ್ಯೆಗೆ ಕೇಂದ್ರದ ನೀತಿಗಳೇ ಕಾರಣ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಕೂಡ ಬೇರೆ ರಾಜ್ಯಗಳಂತೆ ಕರ್ನಾಟಕಕ್ಕೂ ಸಮರ್ಪಕ ಗ್ಯಾಸ್ ಹಂಚಿಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

ಆದರೆ ಬಿಜೆಪಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಕೇಂದ್ರ ಸರ್ಕಾರ ಅಗತ್ಯ ಪೂರೈಕೆಗೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ರಾಜ್ಯ ಸರ್ಕಾರ ಅನಗತ್ಯವಾಗಿ ಆತಂಕ ಸೃಷ್ಟಿಸುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎಂಬ ರಾಜಕೀಯ ವಲಯದ ಚರ್ಚೆ ಜೋರಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !