ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್ ರೆಬಲ್ ಸ್ಟಾರ್ ಕೃಷ್ಣಂರಾಜು ಇಂದು ನಿಧನರಾಗಿದ್ದು ಸಿನಿರಂಗ ಅಷ್ಟೇ ಅಲ್ಲದೆ ರಾಜಕೀಯ ವಲಯದಲ್ಲಿಯೂ ಶೋಕ ಮಡುಗಟ್ಟಿದೆ. ಇವರ ನಿಧನಕ್ಕೆ ಮಾಜಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಸಿಎಂ ಕೆಸಿಆರ್, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಸಚಿವ ಕೆಟಿಆರ್, ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ರಾಜ್ಯಪಾಲ ವಿದ್ಯಾಸಾಗರ ರಾವ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.
ಜನಪ್ರಿಯ ನಟ ಹಾಗೂ ಕೇಂದ್ರದ ಮಾಜಿ ಸಚಿವ ಕೃಷ್ಣಂ ರಾಜು ಅವರ ನಿಧನಕ್ಕೆ ತೆಲಂಗಾಣ ಸಿಎಂ ಕೆಸಿಆರ್ ಸಂತಾಪ ಸೂಚಿಸಿದ್ದಾರೆ. ತಮ್ಮ 50 ವರ್ಷಗಳ ಸಿನಿಜೀವನದಲ್ಲಿ ಕೃಷ್ಣಂರಾಜು ಅವರು ಹಲವು ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ತಮ್ಮ ವಿಶಿಷ್ಟ ನಟನೆಯಿಂದ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿದ್ದನ್ನು ಸ್ಮರಿಸಿದರು. ಅವರ ನಿಧನ ತೆಲುಗು ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು ಕೆಸಿಆರ್ ಹೇಳಿದರು.
ಮಾಜಿ ಕೇಂದ್ರ ಸಚಿವ ಹಾಗೂ ಖ್ಯಾತ ಚಿತ್ರನಟ ಶ್ರೀ ಉಪ್ಪಲಪಾಟಿ ವೆಂಕಟ ಕೃಷ್ಣಮರಾಜು ಅವರು ನಿಧನರಾಗಿದ್ದು ಅತೀವ ದುಃಖ ತಂದಿದೆ. ಒಳ್ಳೆಯತನಕ್ಕೆ ಹೆಸರಾಗಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತಾ ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ನನ್ನ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಟ್ವೀಟ್ ಮಾಡಿದ್ದಾರೆ.
కేంద్ర మాజీ మంత్రి, ప్రముఖ చలనచిత్ర నటులు శ్రీ ఉప్పలపాటి వెంకట కృష్ణంరాజు గారు పరమపదించడం అత్యంత విచారకరం. మంచితనానికి మారుపేరుగా అనేకమంది అభిమానాన్ని చూరగొన్న వారి ఆత్మకు శాంతి కలగాలని ప్రార్థిస్తూ ఆయన కుటుంబ సభ్యులకు, అభిమానులకు సానుభూతి తెలియజేస్తున్నాను. pic.twitter.com/9xSQVkm2kU
— M Venkaiah Naidu (@MVenkaiahNaidu) September 11, 2022
ప్రముఖ నటులు, మాజీ కేంద్ర మంత్రి శ్రీ కృష్ణంరాజు గారి మృతి దిగ్భ్రాంతికి గురి చేసింది. నటునిగా విభిన్న పాత్రలలో మెప్పించిన కృష్ణంరాజు గారు, రాజకీయాలలో కూడా నిజాయితీతో ప్రజలకు సేవలు అందించారు. ఆయన మృతి తెలుగు నేలకు తీరని లోటు.(1/2) pic.twitter.com/e9nBVU3Zye
— N Chandrababu Naidu (@ncbn) September 11, 2022
Saddened to learn about the demise of one of the most popular stars of Telugu Cinema, Rebel star Sri Krishnam Raju Garu
My wholehearted condolences to Prabhas Garu, his family members & friends
Rest in peace #KrishnamRaju Garu 🙏
— KTR (@KTRTRS) September 11, 2022