ನೀರಿನ ವಿಚಾರದಲ್ಲಿ ರಾಜಕೀಯ ಸರಿಯಲ್ಲ: ಅಣ್ಣಾ ಮಲೈ

ಹೊಸದಿಗಂತ ವರದಿ, ಮಂಗಳೂರು:

ಕರ್ನಾಟಕ ಮತ್ತು ತಮಿಳುನಾಡಿನ ಜನತೆ ಪರಸ್ಪರ ಅನ್ಯೋನ್ಯವಾಗಿದ್ದಾರೆ. ಮೇಕೆದಾಟು, ಕಾವೇರಿ ವಿಚಾರಗಳು ಭಾವನಾತ್ಮಕವಾಗಿದ್ದು, ಈ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕೀಯ ಮಾಡಿ ಜನತೆಯ ದಾರಿ ತಪ್ಪಿಸುತ್ತಿದೆ ಎಂದು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ ಹೇಳಿದ್ದಾರೆ.

ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿಗೆ ಸಂಬಂಧಿಸಿದ ವಿಚಾರಗಳನ್ನು ವಾಟರ್ ಬೋರ್ಡ್ ಪರಿಹರಿಸಲಿದೆ. ಈ ವಿಚಾರದಲ್ಲಿ ಪರಸ್ಪರ ನಂಬಿಕೆ, ವಿಶ್ವಾಸವನ್ನು ಕದಡುವ ಕೆಲಸ ಯಾರೂ ಮಾಡಬಾರದು. ಇಂತಹ ವಿಚಾರಗಳಲ್ಲಿ ರಾಜಕೀಯ ಬೆರೆಸುವುದು ಕೀಳು ಮಟ್ಟದ ರಾಜಕಾರಣ ಎಂದವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!