ಡಿಕೆಶಿಯಿಂದ ಭಯೋತ್ಪಾದನ ರಾಜಕಾರಣ : ಕಟೀಲು

ಹೊಸದಿಗಂತ ವರದಿ ಮುರ್ಡೇಶ್ವರ :

ರೌಡಿಸಂ ರಾಜಕಾರಣ ಬಿಟ್ಟು ಭಯೋತ್ಪಾದನೆ ರಾಜಕಾರಣಕ್ಕೆ ಶಿವಕುಮಾರ್ ಕಾಲಿಟ್ಟಿದ್ದಾರೆ.ಜನ ಭ್ರಷ್ಟಾಚಾರಿಗಳನ್ನು ಜನರು ದೂರವಿಟ್ಟಿದ್ದು, ಕಾಂಗ್ರೆಸ್‍ಮುಕ್ತ ಭಾರತವನ್ನು ನಿರ್ಮಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಟೀಕಿಸಿದ್ದಾರೆ.

ಮಂಗಳವಾರ ಆರಂಭವಾದ ಬಿಜೆಪಿ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಪಂಚರಾಜ್ಯ ಚುನಾವಣೆ, 2 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್‍ಮುಕ್ತ ದೇಶ ಆಗುತ್ತಿರುವುದಕ್ಕೆ ಇದೇ ಸ್ಪಷ್ಟ ನಿದರ್ಶನ ಎಂದು ವಿಶ್ಲೇಷಿಸಿದರು.
ನೀಚ- ತುಷ್ಟೀಕರಣ- ಭ್ರಷ್ಟಾಚಾರ- ಪರಿವಾರವಾದದ ರಾಜಕೀಯವನ್ನು ಜನರು ತಿರಸ್ಕರಿಸುತ್ತಿದ್ದಾರೆ ಎಂದು ತಿಳಿಸಿದರು.

ಹಿರಿಯರ ತ್ಯಾಗ- ಬಲಿದಾನದಿಂದ ಪಕ್ಷವು ದೇಶದಲ್ಲೇ ಅತಿದೊಡ್ಡ ಪಕ್ಷವಾಗಿ ಬೆಳೆದಿದೆ ಎಂದ ಅವರು, ಇಲ್ಲಿ ಮೊದಲ ಬಾರಿಗೆ ರಾಜ್ಯ ಪದಾಧಿಕಾರಿಗಳ ಸಭೆ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!