ನಾಳೆಯಿಂದ ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ಆರಂಭ, ಜ.22ರಂದು ಪ್ರಾಣಪ್ರತಿಷ್ಠೆ: ಚಂಪತ್‌ ರೈ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ.22ರಂದು ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಿ 2 ಗಂಟೆಗೆ ಒಳಗೆ ಅಯೋಧ್ಯೆಯಲ್ಲಿ ರಾಮಲಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಜನವರಿ 16ರಿಂದಲೇ ಪೂಜಾ ಕೈಂಕರ್ಯಗಳು ಆರಂಭಗೊಳ್ಳುತ್ತಿದೆ. ಜನವರಿ 21ರ ವರೆಗೆ ಪೂಜೆಗಳು ನಡಯಲಿದೆ. ಜನವರಿ 22ರಂಂದು ಪ್ರಾಣಪ್ರತಿಷ್ಠೆ ಹಾಗೂ ಉದ್ಘಾಟನೆ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಜನವರಿ 23ರಿಂದಲೇ ಭವ್ಯ ರಾಮ ಮಂದಿರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ ಎಂದುಹೇಳಿದ್ದಾರೆ.

ಜನವರಿ 22ರಂದು ಆಹ್ವಾನಿತ ಗಣ್ಯರು, ವಿವಿಧ ಕ್ಷೇತ್ರಗಳ ಸಾಧಕರು ಆಗಮಿಸುವ ಕಾರಣ ಭಾರಿ ಬಿಗಿ ಭದ್ರತೆ ನೀಡಲಾಗುತ್ತದೆ. ಸ್ಥಳವಕಾಶ, ಭದ್ರತೆ ಸೇರಿದಂತೆ ಹಲವು ಕಾರಣಗಳಿಂದ ಸರ್ವಜನಿಕರ ತಮ್ಮ ಸ್ಥಳೀಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ. ಮನೆಯಲ್ಲಿ ದೀಪ ಬೆಳಗಿ ಶ್ರೀರಾಮ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳಿ ಎಂದು ಚಂಪತ್ ರಾಯ್ ಹೇಳಿದ್ದಾರೆ. ಜ

‘ಪ್ರಾಣ ಪ್ರತಿಷ್ಠಾ’ ಮಾಡಲಾಗುವ ವಿಗ್ರಹವು ಸುಮಾರು 150-200 ಕೆಜಿಯಷ್ಟು ಇರಬಹುದೆಂದು ನಿರೀಕ್ಷಿಸಲಾಗಿದೆ ಎಂದಿದ್ದಾರೆ. ಜನವರಿ 18ರಂದು ವಿಗ್ರಹವನ್ನು ರಾಮ ಮಂದಿರದ ಗರ್ಭಗುಡಿಯಲಿ ಇರಿಸಲಾಗುತ್ತದೆ. ರಾಮಲಲಾ ಪ್ರಾಣಪ್ರತಿಷ್ಠೆ ನಡೆಯುವ ವೇಳೆ ಗರ್ಭ ಗುಡಿಯಲ್ಲಿ ಪ್ರಧಾನಿ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನೃತ್ಯ ಗೋಪಾಲ್ ಜಿ ಮಹರಾಜ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ರಾಮಜನ್ಮಭೂಮಿ ಟ್ರಸ್ಟಿಗಳು ಇರಲಿದ್ದಾರೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಸಂತರು, ವಿವಿಧ ಕ್ಷೇತ್ರಗಳ ತಜ್ಞರು, ಪದ್ಮಪ್ರಶಸ್ತಿ ಪುರಸ್ಕೃತರನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ. ರಾಮ ಮಂದಿರ ಲೋಕಾರಪಣೆಗೆ ಕಾರ್ಯಗಳು ಪ್ರಗತಿಯಲ್ಲಿದೆ. ಪೂಜಾ ಕೈಂಕರ್ಯಳಿಗೆ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಭಾರತೀಯರು ಕಾತರರಾಗಿದ್ದಾರೆ. ರಾಮ ಮಂದಿರ ಪ್ರಾಣಪ್ರತಿಷ್ಟೆ ಹಾಗೂ ಉದ್ಘಾಟನೆಯನ್ನು ಸೂಸೂತ್ರವಾಗಿ ನೆರವೇರಿಸಲು ಉತ್ತರ ಪ್ರದೇಶ ಸರ್ಕಾರದ ಜೊತೆಗೆ ಈಗಾಗಲೇ ಸಭೆ ನಡೆಸಿದ್ದೇವೆ. ಭದ್ರತೆ, ಟ್ರಾಫಿಕ್, ವ್ಯವಸ್ಥೆಗಳ ಕುರಿತು ಚರ್ಚಿಸಲಾಗಿದೆ ಎಂದು ಚಂಪತ್ ರಾಯ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!