ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿನೆಲ್ಲೆಡೆ ಇಂದು ಶಿವನಾಮ ಸ್ಮರಣೆ ಮಾಡಲಾಗುತ್ತಿದೆ. ಕಲಬುರಗಿಯ ಲಾಡ್ಲೇ ಮಶಾಕ್ ದರ್ಗದಲ್ಲಿರುವ ಶ್ರೀರಾಘವ ಚೈತನ್ಯ ಶಿವಲಿಂಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಪೂಜೆ ಸಲ್ಲಿಸಲಾಗುತ್ತದೆ.
ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವನಿಗೆ ಪೂಜೆ ಸಲ್ಲಿಸಲಾಗುತ್ತದೆ.
ಇಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 3 ಗಂಟೆವರೆಗೆ ದರ್ಗಾದಲ್ಲಿ ನಮಾಜ್ ನಡೆಯಲಿದೆ. ಇದಾದ ನಂತರದಿಂದ ಶಿವಲಿಂಗಕ್ಕೆ ಹಿಂದೂಗಳು ಪೂಜೆ ಸಲ್ಲಿಸಬಹುದು ಎಂದು ಕೋರ್ಟ್ ಹೇಳಿದೆ. ಇದಕ್ಕೂ ಮುನ್ನ ಪ್ರಗತಿ ಟೌನ್ಶಿಪ್ನಲ್ಲಿ ಮಹಾಶಿವರಾತ್ರಿ ಮಹಾಸಂಗಮ ಕಾರ್ಯಕ್ರಮ ನಡೆಯಲಿದೆ. ದರ್ಗಾ ಸುತ್ತಾಮುತ್ತಾ 1500 ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.