ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದೆಹಲಿಯ ಜಿಮ್ನಲ್ಲಿ ವರ್ಕ್ಔಟ್ ಮಾಡ್ತಿದ್ದಾಗ ಘಟನೆ ನಡೆದಿದೆ . ಸದ್ಯ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಸ್ಟ್ಯಾಂಡ್-ಅಪ್ ಕಮೇಡಿಯನ್ ಆಗಿರುವ ರಾಜು ಶ್ರೀವಾಸ್ತವ್ ನಿನ್ನೆ ರಾತ್ರಿ ಜಿಮ್ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ತಕ್ಷಣವೇ ಏಮ್ಸ್ಗೆ ಕರೆತರಲಾಗಿತ್ತು. ಡಾ.ನಿತೀಶ್ ನ್ಯಾಯ್ ನೇತೃತ್ವದ ಹೃದ್ರೋಗ ಮತ್ತು ತುರ್ತು ವಿಭಾಗದ ಎಐಐಎಂಎಸ್ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಈ ಕುರಿತಂತೆ ರಾಜು ಶ್ರೀವಾಸ್ತವ್ ಸಹೋದರ ಆಶಿಶ್ ಶ್ರೀವಾಸ್ತವ್ ಮಾಹಿತಿ ನೀಡಿದರು.
ಮೂಲತಃ ಕಾನ್ಪುರ ಮೂಲದವರಾಗಿರುವ ಇವರು, ಉತ್ತರ ಪ್ರದೇಶ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.