ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಬಿಜೆಪಿಯ ಮಂಡಿ ಅಭ್ಯರ್ಥಿಯಾಗಿ ನಟಿ ಕಂಗನಾ ಅವರನ್ನು ಕಣಕ್ಕೆ ಇಳಿಸಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಕಂಗನಾ ಕುರಿತು ಅವಹೇಳನ ಪೋಸ್ಟ್ ಮಾಡಿದ್ದರು.
ಇದರ ಬೆನ್ನಲ್ಲೇ ಇದೀಗ ಈ ವಿವಾದಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದೆ
ರಾಷ್ಟ್ರೀಯ ಮಹಿಳಾ ಆಯೋಗ ಮಾರ್ಚ್ 25 ರಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಕಂಗನಾ ರಣಾವತ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಶ್ರಿನಾಟೆ ಮತ್ತು ಇನ್ನೊಬ್ಬ ಕಾಂಗ್ರೆಸ್ ಮುಖಂಡ ಎಚ್ಎಸ್ ಅಹಿರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಭಾರತದ ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಶ್ರಿನಾಟೆ ಮತ್ತು ಅಹಿರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.”ಸಾಮಾಜಿಕ ಮಾಧ್ಯಮದಲ್ಲಿ ಕಂಗನಾ ಬಗ್ಗೆ ಅಶ್ಲೀಲ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಸುಪ್ರಿಯಾ ಶ್ರಿನಾಟೆ ಮತ್ತು ಎಚ್.ಎಸ್.ಅಹಿರ್ ಅವರ ಅವಮಾನಕರ ನಡವಳಿಕೆಯಿಂದ ದಿಗ್ಭ್ರಮೆಗೊಂಡಿದ್ದೇವೆ” ಎಂದು ತಿಳಿಸಿದೆ.