ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ವಿರುದ್ಧದ ಪೋಸ್ಟ್‌: ತೆಲಂಗಾಣದಲ್ಲಿ ಕಲ್ಲುತೂರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ವಿರುದ್ಧವಾಗಿರುವ ಪೋಸ್ಟ್‌ ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿ ತೆಲಂಗಾಣದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣದ ಜಿಲ್ಲೆಯ ಪೋಲೀಸ್‌ ಸ್ಟೇಷನ್‌ ಎದುರಲ್ಲಿ ಭಾರಿ ಸಂಖ್ಯೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು ವಾಟ್ಸಾಪ್‌ ನಲ್ಲಿ ಪ್ರವಾದಿ ವಿರುದ್ಧ ಪೋಸ್ಟ್‌ ಹಂಚಿಕೊಂಡ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯು ಉಗ್ರ ಸ್ವರೂಪಕ್ಕೆ ತಿರುಗಿದ್ದು ಕೆಲವರು ಪೋಲೀಸ್‌ ಠಾಣೆಯೊಳಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಕೆಲವರು ಕಲ್ಲುತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೋಲೀಸರು ಲಾಠಿಪ್ರಹಾರ ನಡೆಸಿ ಹೆಣಗಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಘಟನಾ ಸ್ಥಳಕ್ಕೆ ಪೋಲೀಸ್‌ ವರಿಷ್ಠಾಧಿಕಾರಿ ಆಗಮಿಸಿ ಭಾರತೀಯ ದಂಡಸಂಹಿತೆಯ 295ಎ (ಧಾರ್ಮಿಕ ಭಾವನೆಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!