ಸಿಡಿಎಸ್‌ ಜ.ಬಿಪಿನ್‌ ರಾವತ್‌ಗೆ ಮರಣೋತ್ತರ ಪದ್ಮ ವಿಭೂಷಣ: ಪುತ್ರಿಯರಿಗೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್

2022ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.
ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನು ರಾವತ್‌ ಅವರ ಪುತ್ರಿಯರಾದ ಕ್ರಿತಿಕಾ ಮತ್ತು ತರಿಣಿ ಅವರು ಸ್ವೀಕರಿಸಿದರು.
ಸಾರ್ವಜನಿಕ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್‌ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರಿಗೆ ಘೋಷಿಸಿದ್ದ ಪದ್ಮ ಭೂಷಣ ಪ್ರಶಸ್ತಿಯನ್ನು ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!