ಕೇರಳದ ‘ಸ್ತ್ರೀ ಶಕ್ತಿ ಸಂಗಮಮ್‌’ ಸಮಾವೇಶದ ದಿನಾಂಕ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಆಯೋಜನೆಗೊಂಡಿರುವ ‘ಸ್ತ್ರೀ ಶಕ್ತಿ ಸಂಗಮಮ್‌’ ಎಂಬ ಬೃಹತ್ ಸಮಾವೇಶದ ದಿನಾಂಕವನ್ನು ಮುಂದೂಡಲಾಗಿದೆ’ ಎಂದು ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿದ್ದಾರೆ.

ಜ. 2ಕ್ಕೆ ನಿಗದಿಯಾಗಿದ್ದ ಸಮಾವೇಶವನ್ನು ಜನವರಿ 3ಕ್ಕೆ ಮುಂದೂಡಲಾಗಿದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆಯಾಗಿದೆ ಎಂದು ಸುರೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ತ್ರಿಶೂರ್‌ನ ತೆಕ್ಕಿನಾಡು ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಇದರಲ್ಲಿ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಉದ್ಯಮಿಗಳು, ನರೇಗಾ ಕಾರ್ಮಿಕರು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರು ಸೇರಿದಂತೆ ಹಲವು ಕ್ಷೇತ್ರಗಳ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.

‘ಈ ಸಮಾವೇಶದ ಮುಖ್ಯ ಉದ್ದೇಶವೇ ಮಹಿಳಾ ಮೀಸಲಾತಿಗಾಗಿ ಪ್ರಧಾನಿಗೆ ಅಭಿನಂದನೆ ಸಲ್ಲಿಸುವುದಾಗಿದೆ’ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!