ದೆಹಲಿಯಲ್ಲಿ ವಿದ್ಯುತ್ ಕಡಿತ ಹೆಚ್ಚಳ: ಬಿಜೆಪಿ ವಿರುದ್ಧ ಹರಿಹಾಯ್ದ AAP ನಾಯಕಿ ಅತಿಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಮ್ ಆದ್ಮಿ ಪಕ್ಷದ ಮತ್ತು ದೆಹಲಿ ವಿರೋಧ ಪಕ್ಷದ ನಾಯಕಿ ಅತಿಶಿ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರ ರಾಜಧಾನಿಯಲ್ಲಿ ವಿದ್ಯುತ್ ಕಡಿತ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ರೇಖಾ ಗುಪ್ತಾ ನೇತೃತ್ವದ ಸರ್ಕಾರದ ಮೇಲೆ ಮತ್ತಷ್ಟು ದಾಳಿ ಮಾಡಿದ ಅವರು, ಬಿಜೆಪಿ ಸರ್ಕಾರ ನಡೆಸಲು ಅರ್ಹತೆ ಹೊಂದಿಲ್ಲ, ಅದಕ್ಕಾಗಿಯೇ ಇಂದು 24 ಗಂಟೆಗಳ ವಿದ್ಯುತ್ ಮಾದರಿ ವಿಫಲವಾಗಿದೆ ಎಂದು ಹೇಳಿದರು.

“ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ, ವಿದ್ಯುತ್ ಕಡಿತ ನಿರಂತರವಾಗಿ ಹೆಚ್ಚುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ, ನೀವು ಪ್ರತಿದಿನ ಇಂತಹ ಪೋಸ್ಟ್‌ಗಳನ್ನು ನೋಡಬಹುದು… ಮಾರ್ಚ್ 1 ರಿಂದ ದೆಹಲಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಹೆಚ್ಚಾಗಿದೆ ಎಂದು ದೆಹಲಿ ಸರ್ಕಾರದ ದತ್ತಾಂಶವು ತೋರಿಸುತ್ತದೆ” ಎಂದು ಅತಿಶಿ ತಿಳಿಸಿದರು.

“ಬಿಜೆಪಿಗೆ ಸರ್ಕಾರವನ್ನು ಹೇಗೆ ನಡೆಸಬೇಕೆಂದು ತಿಳಿದಿಲ್ಲ. ಅವರು ಅರ್ಹರಲ್ಲ; ಅದಕ್ಕಾಗಿಯೇ ಈಗ 24 ಗಂಟೆಗಳ ವಿದ್ಯುತ್ ಸರಬರಾಜು ವಿಫಲವಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!