ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಹೆಚ್ಚಳ?: ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದೇನು?

 ಹೊಸದಿಗಂತ ವರದಿ, ಮಡಿಕೇರಿ:

ವಿದ್ಯುತ್ ದರ ಹೆಚ್ಚಲಾಗುತ್ತೆ ಎಂಬ ಗೊಂದಲಗಳಿಗೆ ಇಂಧನ ಸಚಿವರು ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ರೀತಿಯ ವಿದ್ಯುತ್ ದರ ಹೆಚ್ಚಳವಿಲ್ಲ ಎಂಬುದಾಗಿ ಹೇಳುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.
ಕೆ ಇ ಆರ್ ಸಿಯಿಂದ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವನ್ನು ಗ್ರಾಹಕರಿಂದಲೇ ವಸೂಲಿ ಮಾಡುವಂತೆ ಅನುಮತಿಸಲಾಗಿತ್ತು. ಹೀಗಾಗಿ ಜುಲೈ.1ರಿಂದ ವಿದ್ಯುತ್ ದರ ಹೆಚ್ಚಳದ ಶಾಕ್ ಜನರಿಗೆ ನೀಡಲಾಗುತ್ತಿದೆ ಎನ್ನಲಾಗಿತ್ತು
ಆದರೆ ಇದಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ವಿ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ವಿದ್ಯುತ್ ಶುಲ್ಕ ಹೆಚ್ಚಳವಿಲ್ಲ. ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಳಕ್ಕೆ ಸೂಚನೆ ಕೂಡ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಇನ್ನೂ ವಿದ್ಯುತ್ ದರವನ್ನು ಪರಿಷ್ಕರಿಸಲಾಗುತ್ತಿದೆ ಎಂದು ಕೆಲವೆಡೆ ತಪ್ಪು ಸಂದೇಶಿ ರವಾನೆಯಾಗುತ್ತಿದೆ. ಆದ್ರೇ ಸರ್ಕಾರ ಯಾವುದೇ ವಿದ್ಯುತ್ ದರ ಹೆಚ್ಚಳಕ್ಕೆ ಸೂಚಿಸಿಲ್ಲ. ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆಯಾಗಿದೆ. ವಿದ್ಯುತ್ ದರ ಹೆಚ್ಚಳದ ಸುದ್ದಿ ವದಂತಿಯಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!