June 30, 2026
Tuesday, June 30, 2026
spot_img

ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜೂನ್ 27 ರಂದು ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಳ್ಳುತ್ತಾ ಕಣ್ಣೀರು ಹಾಕಿದ್ದಾರೆ.

ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಪ್ರದೀಪ್ ಈಶ್ವರ್

ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮಗೆ ಸಾರ್ವಜನಿಕವಾಗಿ ಚಪ್ಪಲಿ ಎಸೆದಿದ್ದಲ್ಲದೆ, ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಅತ್ಯಂತ ಕೆಟ್ಟದಾಗಿ ನಿಂದಿಸಿದರು ಎಂದು ಪ್ರದೀಪ್ ಈಶ್ವರ್ ಭಾಷಣದ ವೇಳೆ ಭಾವುಕರಾಗಿ ಕಣ್ಣೀರು ಹಾಕಿದರು. ತಾವೊಬ್ಬ ಹಿಂದುಳಿದ ವರ್ಗದ ನಾಯಕನಾಗಿದ್ದರಿಂದಲೇ ತಮ್ಮನ್ನು ಈ ರೀತಿ ಗುರಿ ಮಾಡಲಾಗುತ್ತಿದೆ ಎಂದು ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ಸಾಂತ್ವನ:

ಪ್ರದೀಪ್ ಈಶ್ವರ್ ಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, ರಾಜಕಾರಣದಲ್ಲಿ ಇಂತಹ ಸವಾಲುಗಳು ಮತ್ತು ಘಟನೆಗಳು ಸಾಮಾನ್ಯ. ಇದಕ್ಕೆ ಧೃತಿಗೆಡಬಾರದು, ಧೈರ್ಯದಿಂದ ಎದುರಿಸಬೇಕು. ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಂತ್ವನ ನೀಡಿದ್ದಾರೆ.

ಇದನ್ನೂ ಓದಿ:

ತನಿಖೆಗೆ ಕಟ್ಟುನಿಟ್ಟಿನ ಆದೇಶ

ಪೊಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕರೊಬ್ಬರಿಗೆ ಈ ರೀತಿ ಅವಮಾನ ಆಗಿರುವುದಕ್ಕೆ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕೂಡಲೇ ಗೃಹ ಸಚಿವರೊಂದಿಗೆ ಮಾತನಾಡಿ, ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಕರ್ತವ್ಯ ಲೋಪ ಎಸಗಿದ ಭದ್ರತಾ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿಕೊಂಡಿದ್ದ ಚಿಕ್ಕಬಳ್ಳಾಪುರ ಪೊಲೀಸರು, ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಎಂಬ ನಾಲ್ವರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದು, ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !