ಪ್ರಜಾಧ್ವನಿ ಬಸ್ ಯಾತ್ರೆ: ಕೈ ಮಹಿಳಾ ಮಣಿಗಳಿಂದ ಸೀರೆ, ಮೊಬೈಲ್ ಹಂಚಿಕೆ ಫೋಟೋ ವೈರಲ್!

ಹೊಸದಿಗಂತ ವರದಿ,ವಿಜಯಪುರ :

ಪ್ರಜಾಧ್ವನಿ ಬಸ್ ಯಾತ್ರೆ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಮಣಿಗಳು ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ಮನೆಗೊಂದು ಸೀರೆ, ಒಂದು ಮೊಬೈಲ್ ಹಂಚುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಬಬಲೇಶ್ವರ ಮತಕ್ಷೇತ್ರಕ್ಕೆ ಪ್ರಜಾಧ್ವನಿ ಯಾತ್ರೆ ಆಗಮಿಸುತ್ತಿರುವ ಹಿನ್ನೆಲೆ, ಈ ಕಾರ್ಯಕ್ರಮಕ್ಕೆ ಜನರನ್ನು ಸೆಳೆಯುವ ನಿಟ್ಟಿನಲ್ಲಿ ಮಹಿಳೆಯರಿಗೆ ರಾಜಾರೋಷವಾಗಿ 1200 ರೂ. ಬೆಲೆಯ ಮೊಬೈಲ್ ಹಾಗೂ 300 ಮೌಲ್ಯದ ಸೀರೆ ಹಂಚಿಕೆ ಮಾಡಿ, ತಪ್ಪದೇ ಪ್ರಜಾಧ್ವನಿ ಬಸ್ ಯಾತ್ರೆಗೆ ಬನ್ನಿ. ಯಾತ್ರೆಯನ್ನು ಯಶಸ್ವಿಗೊಳಿಸಿ ಎಂದು ಮಹಿಳೆಯರಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕಿಯರು ಮನವಿ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!