ಹೊಸದಿಗಂತ ವರದಿ ಬಾಗಲಕೋಟೆ:
ಕಾಂಗ್ರೆಸ್ ಪಕ್ಷದಿಂದ ಜ.18ರಂದು ನವನಗರದ ಕಾಳಿದಾಸ ಕಾಲೇಜ್ ಮೈದಾನದಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರಾ ಕಾರ್ಯಕ್ರಮ ನಿಮಿತ್ತ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ರಾಲಿನಡೆಸಲಾಯಿತು.
ನಗರದ ಕಾಂಗ್ರೆಸ್ ಕಚೇರಿ ಆವರಣದಿಂದ ಆರಂಭಗೊಂಡ ಬೈಕ್ ರಾಲಿಗೆ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ,ಮಾಜಿ ಸಚಿವ ಎಚ್.ವೈ.ಮೇಟಿ ಚಾಲನೆ ನೀಡಿದರು. ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ, ಜಿಲ್ಲಾ ಪ್ರಚಾರ ಸಮಿತಿ ಅಧ್ತಕ್ಷ ನಾಗರಾಜ ಹದ್ಲಿ, ಗೋಡಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.