ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಬಗ್ಗೆ ನಟ, ನಿರ್ದೇಶಕ ಎಸ್. ನಾರಾಯಣ್ ಮಾತನಾಡಿದ್ದಾರೆ.
ಈ ಪ್ರಕರಣ ಮಾನವ ಕುಲಕ್ಕೆ ಕಳಂಕ. ನಾವು ನಾಗರೀಕ ಸಮಾಜದಲ್ಲಿ ಬದುಕುತ್ತಿದ್ದೇವೆ. ಇಂತಹ ಘಟನೆಗಳು ಆದಾಗ ನೋವಾಗುತ್ತದೆ. ಯಾರೇ ತಪ್ಪು ಮಾಡಲಿ ಅವರಿಗೆ ಶಿಕ್ಷೆ ಆಗಬೇಕು. ಹೆಣ್ಣುಮಕ್ಕಳಿಗೆ ಎಲ್ಲರೂ ಗೌರವ ನೀಡುವುದನ್ನು ಕಲಿಯಬೇಕು ಎಂದು ಅವರು ಹೇಳಿದ್ದಾರೆ.