ಪ್ರಜ್ವಲ್ ರೇವಣ್ಣ ಪ್ರಕರಣ: ಚೇತನ್, ಲಿಖಿತ್‌ಗೌಡಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.

ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡರನ್ನು ಮೇ 12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ ನಂತರ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಹದಿನೆಂಟು ದಿನಗಳ ಬಳಿಕ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಚೇತನ್ ಹಾಗೂ ಲಿಖಿತ್‌ಗೌಡ ಇದ್ದು, ಇಂದು ಸಂಜೆ ಅಥವಾ ನಾಳೆ (ಶುಕ್ರವಾರ) ಇಬ್ಬರೂ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!