ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಹೆಚ್​ಡಿ ರೇವಣ್ಣ ಬಂಧನದ ನಂತರ ಪ್ರಜ್ವಲ್‌ಗಾಗಿ ಬೇಟೆ ಕೂಡ ತೀವ್ರಗೊಂಡಿದೆ.

ದೇಶದಿಂದ ದೇಶಕ್ಕೆ ಹಾರುತ್ತಿರುವ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಜಾಲ ಸಿದ್ಧವಾಗಿದೆ. ಇಂದು ಪ್ರಜ್ವಲ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್ ಬಂಧನದ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿಯೇ ಬಂಧಿಸುವ ಸಾಧ್ಯತೆ ಇದೆ.

ಮಂಗಳೂರು, ಕೊಚ್ಚಿ, ಗೋವಾ ಮತ್ತು ಬೆಂಗಳೂರಿನ ಪ್ರತಿ ವಿಮಾನ ನಿಲ್ದಾಣದಲ್ಲಿ ಬಂಧನ ಪ್ರಕ್ರಿಯೆ ನಡೆಯುತ್ತದೆ. ನಂತರ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದ ಪೊಲೀಸರು, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಎಸ್‌ಐಟಿ ಪ್ರಜ್ವಲ್‌ನನ್ನು ಬೆಂಗಳೂರಿಗೆ ಕರೆದೊಯ್ಯಲಿದೆ.

ಸದ್ಯ ಇಂದು ಮಂಗಳೂರು ಏರ್​ಪೋರ್ಟ್​ಗೆ ಒಟ್ಟು 4 ವಿಮಾನ ಆಗಮಿಸಿವೆ. ಅಬುದಾಬಿಯಿಂದ ಈಗಷ್ಟೇ ಒಂದು ವಿಮಾನ ಲ್ಯಾಂಡ್ ಆಗಿದೆ. ಬೆಳಗ್ಗೆ 7.55ಕ್ಕೆ ದುಬೈನಿಂದ ಎರಡನೇ ವಿಮಾನ, ಸಂಜೆ 4.35ಕ್ಕೆ ದುಬೈನಿಂದ ಮಂಗಳೂರಿಗೆ 3ನೇ ವಿಮಾನ ಮತ್ತು ಸಂಜೆ 6.15ಕ್ಕೆ ಮಂಗಳೂರಿಗೆ ನಾಲ್ಕನೇ ವಿಮಾನ ಆಗಮಿಸಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!