ಕಾಡಾನೆ ದಾಳಿಗೊಳಗಾದ ಸಂತ್ರಸ್ಥನನ್ನು ಭೇಟಿಯಾದ ಪ್ರಜ್ವಲ್ ರೇವಣ್ಣ: ಪರಿಹಾರ ಕ್ರಮಕ್ಕೆ ಭರವಸೆ

ಹೊಸದಿಗಂತ ಹಾಸನ:

ಕಾಡಾನೆ ದಾಳಿಯಿಂದ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿರುವ ರೈತನನ್ನು ಸಂಸದ ಪ್ರಜ್ವಲ್ ರೇವಣ್ಣ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ಥನ ಆರೋಗ್ಯ ವಿಚಾರಿಸಿದ್ದಾರೆ.

ಕಾಡಾನೆ ಕರಡಿ ಮತ್ತೆ ಡೆಡ್ಲಿ ಅಟ್ಯಾಕ್ ಮಾಡಿದ್ದು ಕಾಡಾನೆ ದಾಳಿಯಿಂದ ರೈತನ ಸ್ಥಿತಿ ಗಂಭೀರ ವಾಗಿರುವ ಘಟನೆ ಬೇಲೂರು ತಾಲ್ಲೂಕಿನ, ಬೊಮ್ಮಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವರಾಜು (58) ಗಂಭೀರವಾಗಿ ಗಾಯಗೊಂಡ ರೈತ ನಾಗಿದ್ದು ಜಮೀನಿಂದ ಜಾನುವಾರುಗಳೊಂದಿಗೆ ಮನೆಗೆ ಬರುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳಲು‌ ಯತ್ನಿಸಿದರು. ದೇವರಾಜುನನ್ನು ಸೊಂಡಲಿನಿಂದ ಎಸೆದು ಕಾಲಿನಿಂದ ತುಳಿದು ಗಾಯಗೊಳಿಸಿದೆ.

ಕಾಡಾನೆ ತುಳಿತಕ್ಕೆ ದೇವರಾಜು ಕಿವಿ ಕಟ್ ಆಗಿದ್ದು ನಂತರ ಹಳ್ಳಕ್ಕೆ ಬಿದ್ದಿದ್ದಾರೆ ದೇವರಾಜು ಹಳ್ಳಕ್ಕೆ ಬೀಳುತ್ತಿದ್ದಂತೆ ಕಾಡಾನೆ ಕಾಫಿ ತೋಟದೊಳಗೆ ಹೋಗಿದೆ. ಗಾಯಾಳುವಿಗೆ ಬೇಲೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಈ ವೇಳೆ ಚುನಾವಣ ಪ್ರಚಾರದಲ್ಲಿ ಬ್ಯುಸಿ ಇದ್ದರು ಸಹ ಸಂಸದ ಪ್ರಜ್ವಲ್ ರೇವಣ್ಣ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ಥನ ಆರೋಗ್ಯ ವಿಚಾರಿಸಿದ್ದಾರೆ. ರೈತನ ಕುಟುಂಬಕ್ಕೆ ಧೈರ್ಯತುಂಬಿ, ಕಾಡಾನೆ ಹಾವಳಿ ಪರಿಹಾರದ ಬಗ್ಗೆ ಕ್ರಮದ ಭರವಸೆ ನೀಡದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!