ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಇಂದು(ಅಕ್ಟೋಬರ್ 09) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ ಮತ್ತು ನ್ಯಾ.ವೆಂಕಟೇಶ್ ನಾಯ್ಕ್ ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಮಗ್ರ ಸಾರಾಂಶ ಸಲ್ಲಿಸಲು ಪ್ರಜ್ವಲ್ ಪರ ವಕೀಲರಿಗೆ ಸೂಚನೆ ನೀಡಿದೆ. ಜೊತೆಗೆ ಪ್ರಜ್ವಲ್ ಮೇಲ್ಮನವಿ ಬಗ್ಗೆ ಪ್ರತಿವಾದಿಯಾಗಿ ವಾದಿಸಲು ಎಸ್ಪಿಪಿ ನೇಮಕದ ಬಗ್ಗೆಯೂ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.