ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಯ ವೇಳೆ ಇನ್ ಕ್ಯಾಮೆರಾ ವಿಚಾರಣೆ (ಮುಚ್ಚಿದ ಕೊಠಡಿಯಲ್ಲಿ) ನಡೆಸಲು ಅನುಮತಿ ಸಿಕ್ಕಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಈ ವೇಳೆ ಅರ್ಜಿಗೆ ಎಸ್ಐ ಟಿ ಎಸ್ ಪಿ ಪಿ ಅಶೋಕ್ ನಾಯಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆರೋಪ ಪಟ್ಟಿಯಲ್ಲಿನ ಅಂಶಗಳನ್ನು ಮುಂದಿಟ್ಟು ಅಶೋಕ್ ನಾಯಕ್ ವಾದ ಮಂಡನೆ ಮಾಡಿದರು.
ಪ್ರತಿವಾದ ಮಂಡಿಸಲು ಕಾಲಾವಕಾಶ ಕೋರಿ ಪ್ರಜ್ವಲ್ ರೇವಣ್ಣ ಪರ ವಕೀಲರು ಇದೆ ವೇಳೆ ಮನವಿ ಮಾಡಿದರು. ಫೋಟೋ ವಿಡಿಯೋ ವೀಕ್ಷಿಸಲು ಕೂಡ ಕಾಲಾವಕಾಶಕ್ಕೆ ಮನವಿ ಮಾಡಿದರು. ಕೇಸ್ ನ ವಿಚಾರಣೆ ಮುಚ್ಚಿದ ಕೊಠಡಿಯಲ್ಲಿ ನಡೆಸುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದರು.
ಅತ್ಯಾಚಾರ ಆರೋಪ ಇರುವುದರಿಂದ ಇನ್ ಕ್ಯಾಮೆರಾ ವಿಚಾರಣೆಗೆ ಮನವಿ ಮಾಡಲಾಯಿತು. ಇನ್ ಕ್ಯಾಮೆರಾ ವಿಚಾರಣೆ ನಡೆಸಲು ಕೋರ್ಟ್ ಸಮ್ಮತಿ ಸೂಚಿಸಿತು.
ಮುಂದಿನ ವಿಚಾರಣೆ ಜನವರಿ 23ಕ್ಕೆ ಮುಂದೂಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತು.