ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು(ಮೇ.30) ಮಧ್ಯರಾತ್ರಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸ್ಐಟಿ(SIT)ತಂಡ ಬಂದಿದ್ದಾರೆ.
ವಿಮಾನ ಇಳಿದು ಇಮಿಗ್ರೇಷನ್ಗೆ ಆಗಮಿಸುವ ಪ್ರಜ್ವಲ್ ರೇವಣ್ಣ, ಇಮಿಗ್ರೇಷನ್ ವೇಳೆಯೇ ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ನಂತರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೋಲೀಸರಿಗೆ ಒಪ್ಪಿಸಲಿದ್ದು, ಬಳಿಕ ಏರ್ಪೋರ್ಟ್ ಪೋಲೀಸರ ಮೂಲಕ ಎಸ್ಐಟಿ ವಶಕ್ಕೆ ಪಡೆಯಲಿದೆ.
ಇನ್ನು ಮಧ್ಯರಾತ್ರಿ 12.30 ಕ್ಕೆ ಪ್ರಜ್ವಲ್ ರೇವಣ್ಣ ಅವರು ಆಗಮಿಸಲಿದ್ದು, ಈ ವೇಳೆ ರ್ಪೋರ್ಟ್ ರೀತಿ-ರಿವಾಜು ಮುಗಿಯುವುದಕ್ಕೆ ಕನಿಷ್ಠ 20 ರಿಂದ 30 ನಿಮಿಷ ಕಾಲಾವಕಾಶ ಇರಲಿದೆ. ನಂತರ ವಿಮಾನ ನಿಲ್ದಾಣದಿಂದ ಪ್ರಜ್ವಲ್ ಹೊರ ಬರಲಿದ್ದಾರೆ. ಈ ಹಿನ್ನಲೆ ಏರ್ಪೋರ್ಟ್ ಟರ್ಮಿನಲ್ ಒಳಗೆ ತೆರಳಲು 8ರಿಂದ 10 ಅಧಿಕಾರಿಗಳಿಗೆ ಪಾಸ್ ನೀಡುವಂತೆ ಪತ್ರ ಏರ್ಪೋರ್ಟ್ ಭದ್ರತಾ ಪಡೆಗೆ ಎಸ್ಐಟಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.