ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ರೇವಣ್ಣ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇನ್ನೂ ಸಂಸದ ಪ್ರಜ್ವಲ್ ರೇವಣ್ಣ ಅವರು ಶರಣಾಗಲಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್ ಪುಟ್ಟರಾಜು (C.S Puttaraju) ಅವರು ಸುಳಿವು ಕೊಟ್ಟಿದ್ದಾರೆ.
ಎಸ್ಐಟಿ ಅಧಿಕಾರಿಗಳು ಎಚ್.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ ಎಂದರು.
ಆದರೆ, ಪ್ರಜ್ವಲ್ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.