ಹೊಸದಿಗಂತ ವರದಿ ಬಾಗಲಕೋಟೆ :
ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಲಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪೂಜಾ ಕಾರ್ಯಕ್ರಮ ನಿಮಿತ್ತ ಜಿಲ್ಲೆಯ ಹಿಂದೂ ದೇವಾಲಯಗಳಲ್ಲಿ ವಿವಿಧ ಪೂಜಾ ಕೈಂಕರ್ಯ ಹಾಗೂ ಅನ್ನಪ್ರಸಾದ ನಡೆಯಿತು.
ಪ್ರಭು ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ಯ ಬಿ.ವ್ಹಿ.ವ್ಹಿ.ಸಂಘದ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿನ ಶಿವಾಲಯದಲ್ಲಿ ಮುಂಜಾನೆ ಹೋಮ, ಹವನ ಪೂಜಾ ಕಾರ್ಯಕ್ರಮ ನಡೆದವು ಮಾಜಿ ಶಾಸಕ ವೀರಣ್ಣ ಚರಂತಿಮಠವರು ಭಾಗಿಯಾಗಿದ್ದರು.