ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಹತ್ಯೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ದಕ್ಷಿಣ ಭಾರತದ ಖ್ಯಾತ ನಟಿ ಪ್ರಣಿತಾ ಸುಭಾಷ್ ಈ ಘಟನೆಯನ್ನು ಖಂಡಿಸಿದ್ದಾರೆ.
ಹಿಂದುಗಳ ಜೀವ ಮುಖ್ಯ (Hindu Lives Matter) ಎಂದು ಬರೆದಿರುವ ಸ್ಲೇಟ್ ಕೈಯಲ್ಲಿ ಹಿಡಿದು ನಿಂತಿರುವ ಫೋಟೋವನ್ನು ನಟಿ ಟ್ವಿಟರ್ನಲ್ಲಿ ಹಾಕಿಕೊಂಡಿದ್ದಾರೆ. ಈ ಮೂಲಕ ಹಿಂದುಗಳ ಜೀವಕ್ಕೂ ಬೆಲೆ ಇದೆ ಎಂಬ ಸಂದೇಶ ಸಾರಿದ್ದಾರೆ.
Is anyone listening? pic.twitter.com/ecu4tjAfYD
— Pranitha Subhash (@pranitasubhash) June 29, 2022