ಹರ್ಷ ಮನೆಗೆ ಪೇಜಾವರ ಶ್ರೀ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಹೊಸದಿಗಂತ ವರದಿ,ಶಿವಮೊಗ್ಗ:

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ  ತೀರ್ಥರು ಇತ್ತೀಚಿಗೆ ಹತ್ಯೆಗೆ ಈಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ  ಮನೆಗೆ ಶುಕ್ರವಾರ
ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನವನ್ನು ಹೇಳಿದರು.
ನಂತರ ಮಾದ್ಯಮದವರ ‌ಜೊತೆ ಮಾತನಾಡಿ,
ಶಿವಾಜಿಯ ಧೈರ್ಯ ಶಿವಾಜಿಯ ದೇಶಪ್ರೇಮ ಮೈಗೂಡಿಸಿಕೊಂಡಿದ್ದ  ಹರ್ಷನ ಅಗಲಿಕೆ ನಮ್ಮ ಸಮಾಜಕ್ಕೆ ಒಂದು ದೊಡ್ಡ ನಷ್ಟ ಎಂದು ದುಃಖ ವ್ಯಕ್ತಪಡಿಸಿದರು.
ಅವನು ಹೋಗುವ ಮುನ್ನ ದೇಶದ ಎಲ್ಲಾ ಯುವಕರಲ್ಲಿ ದೇಶಾಭಿಮಾನ ಮತ್ತು ಸಂಸ್ಕೃತಿ ಮೇಲಿನ ಅಭಿಮಾನವನ್ನು ಇನ್ನಷ್ಟು ಜಾಗೃತಿ ಮೂಡಿಸಿದ್ದಾನೆ. ಅವನಿಗೆ ಶ್ರೇಯಸ್ಸು ಉಂಟಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.
ಇಂತಹ ಘಟನೆಗಳು ನಮ್ಮ ಸಮಾಜದಲ್ಲಿ ಎಂದೂ ಕೂಡ ನಡೆಯಬಾರದು.
ಆದರೆ ಈಗ ನಡೆದಿದೆ. ಅದಕ್ಕೆ ತಕ್ಕದಾದ ಕ್ರಮವನ್ನು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಅವಶ್ಯವಾಗಿ ತೆಗೆದುಕೊಳ್ಳಬೇಕು. ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬರುವಂತೆ ತೀವ್ರವಾದ  ಕ್ರಮ ತೆಗೆದುಕೊಳ್ಳಬೇಕು ಎಂದು ನಾವು ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದರು.
ನಂತರ 2015ರಲ್ಲಿ ಮೃತ ಪಟ್ಟರುವ ವಿಶ್ವನಾಥ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ, ವಿಶ್ವನಾಥ ಶೆಟ್ಟಿ ಅವರ ತಾಯಿಗೆ ಧನ‌ ಸಹಾಯ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!