ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇನ್ನು ಸರ್ಕಾರ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಪ್ರತಾಪ್ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಆಯಕ್ತರಾಗಿ ವರ್ಗಾವಣೆ ಮಾಡಿದ್ದು, ನೇಮಕಾತಿ ವಿಭಾಗದ ಡಿಜಿಪಿಯಾಗಿ ಕಮಲ್ಪಂತ್ ಅವರನ್ನು ವರ್ಗಾವಣೆ ಮಾಡಿದೆ.
ಕೆಎಸ್ಆರ್ಪಿ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಅವರನ್ನು ಲಾ & ಆರ್ಡರ್ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ.1991 ರ ಬ್ಯಾಚ್ ನ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ ಅವರು ಆಂಧ್ರಪ್ರದೇಶದ ಗುಂಟೂರ್ ಮೂಲದವರು.