KRS ರಸ್ತೆಗೆ ಸಿಎಂ ಹೆಸರು ಸಮರ್ಥಿಸಿದ್ದ ಪ್ರತಾಪ್ ಸಿಂಹ ಯುಟರ್ನ್, ಕಾರಣ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಯುಟರ್ನ್ ಹೊಡೆದಿದ್ದಾರೆ. ಮಹಾರಾಜರ ಕಾಲದಲ್ಲಿ ಪ್ರಿನ್ಸಸ್ ರಸ್ತೆ ಎಂಬ ಹೆಸರಿದ್ದರೆ ಬದಲಾವಣೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ. ಈ ಸಂದರ್ಭದಲ್ಲಿ ಕೆಆರ್‌ಎಸ್ ರಸ್ತೆಗೆ ಪ್ರಿನ್ಸಸ್ ಎಂದು ಮಹಾರಾಜರ ಕಾಲದಲ್ಲೇ ಹೆಸರಿತ್ತು ಎನ್ನುವುದಾದರೇ ಬದಲಾಯಿಸುವ ಅಗತ್ಯವಿಲ್ಲ. ಅದು ಒಳ್ಳೆಯದು. ಹೆಸರು ಬದಲಾಯಿಸದಂತೆ ಸ್ಥಳೀಯ ಶಾಸಕ ಹರೀಶ್ ಗೌಡಗೆ ಮನವಿ ಮಾಡುವುದಾಗಿ ತಿಳಿಸಿದರು.

ಕೆಆರ್ ಎಸ್ ರಸ್ತೆಗೆ ಅಧಿಕೃತ ಹೆಸರಿಲ್ಲದ ಕಾರಣ ಹಾಗೂ ಖಾಲಿ ಇರುವ ಕಾರಣ ಸಿದ್ದರಾಮಯ್ಯ ಅವರ ಹೆಸರಿಡಬಹುದು ಎಂದು ಹೇಳಿದ್ದೆ. ದಯವಿಟ್ಟು ನಿಮ್ಮ ರದ್ದತಿಯನ್ನು ಹಿಂಪಡೆಯಿರಿ. ಪ್ರತಿಭಟನಾಕಾರರು ದಾಖಲೆಗಳನ್ನು ನೀಡಬೇಕು. ಚರ್ಚೆಯನ್ನು ಇಲ್ಲಿಗೆ ಮುಗಿಸೋಣ ಎಂದು ಕೇಳಿಕೊಂಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!