ಪ್ರತಾಪಸಿಂಹ ಅಡ್ಜಸ್ಟ್‌ಮೆಂಟ್ ರಾಜಕಾರಣಿ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಹೊಸದಿಗಂತ ವರದಿ,ಮಂಡ್ಯ :

ಕಾಂಗ್ರೆಸ್ ಪಕ್ಷ ಎಂದಿಗೂ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡಿಲ್ಲ. ಪ್ರತಾಪಸಿಂಹ ಮೊದಲ ಅಡ್ಜೆಸ್ಟ್‌ಮೆಂಟ್ ರಾಜಕಾರಣಿ. ಕುಮಾರಸ್ವಾಮಿ ಮತ್ತು ನಮ್ಮ ನಡುವೆ ಹೊಂದಾಣಿಕೆ ಇದೆ ಎಂದು ಅವರೇ ಹೇಳಿಕೊಂಡಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿರುಗೇಟು ನೀಡಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಪ್ರತಾಪ್‌ಸಿಂಹ ಎಲ್ಲರ ಜೊತೆನೂ ಹಾಗೆಯೇ ಹೇಳುತ್ತಾರೆ. ಅಡ್ಜಸ್ಟ್‌ಮೆಂಟ್ ರಾಜಕಾರಣದಲ್ಲಿ ಅವರೇ ಮೊದಲು. ನಮ್ಮ ಮತ್ತು ಕುಮಾರಸ್ವಾಮಿ ನಡುವೆ ಹೊಂದಾಣಿಕೆ ರಾಜಕಾರಣವಿದೆ ಅಂತ ಅವರೇ ಹೇಳಿಕೊಂಡಿರುವಾಗ ನಾವು ಹೊಂದಾಣಿಕೆ ರಾಜಕಾರಣ ಮಾಡಿರುವುದು ಹೇಗೆ ಬರುತ್ತದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಯಾರ ಬೆಂಬಲವನ್ನೂ ಪಡೆಯದೆ ನೇರವಾಗಿ ಚುನಾವಣೆ ಎದುರಿಸಿದೆ. ಜನರು ಆಶೀರ್ವದಿಸಿದ್ದರಿಂದ 135 ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಽಸಿದೆ ಎಂದು ಹೇಳಿದಾಗ, ಅಡ್ಜಸ್ಟ್‌ಮೆಂಟ್ ರಾಜಕಾರಣವಿಲ್ಲದಿದ್ದರೆ ತನಿಖೆ ಮಾಡಿಸಲಿ ಎಂದು ಹೇಳಿದ್ದಾರಲ್ಲ ಎಂದು ಕೇಳಿದಾಗ, ಆಗೆಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಿ ಎಂಬ ವಿಷಯವನ್ನಿಟ್ಟುಕೊಂಡು ಕಾಂಗ್ರೆಸ್ ತೇಜೋವಧೆಗೆ ಪ್ರಯತ್ನಿಸಿದರು. ಹತ್ತೇ ದಿನದಲ್ಲಿ ಗ್ಯಾರಂಟಿಗಳನ್ನು ಜಾರಿಗೊಳಿಸಿದ ಮೇಲೆ ಈಗ ಹೊಂದಾಣಿಕೆ ರಾಜಕಾರಣದ ಬಗ್ಗೆ ತನಿಖೆ ನಡೆಸಲಿ ಎನ್ನುತ್ತಿದ್ದಾರೆ. ಯಾವುದನ್ನೂ ಬಿಡೋದಿಲ್ಲ. ಎಲ್ಲವನ್ನೂ ತನಿಖೆ ಮಾಡುತ್ತೇವೆ. ಅದಕ್ಕೆ ಸ್ವಲ್ಪ ಸಮಯಾವಕಾಶ ಬೇಕು ಎಂದು ಉತ್ತರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!