ಮುಂದುವರಿದ ಪಕ್ಷಾಂತರ ಪರ್ವ: ಮತ್ತೊಬ್ಬ ಬಿಜೆಪಿ ಮುಖಂಡ ಕಾಂಗ್ರೆಸ್‌ ಸೇರ್ಪಡೆ

ಹೊಸದಿಗಂತ ವರದಿ ಬಾಗಲಕೋಟೆ: 

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಟಿಕೆಟ್‌ ಘೋಷಣೆಯಾದಾಗಿನಿಂದಲೂ ರಾಜಕೀಯ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ. ಇದೀಗ ಮತ್ತೊಬ್ಬ ಬಿಜೆಪಿ ಮುಖಂಡ ಕಾಂಗ್ರೆಸ್‌ ಸೇರ್ಪಟೆಯಾಗಿದ್ದಾರೆ.

ಬಿಜೆಪಿ ಮುಖಂಡ, ಬಸವೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪ್ರಕಾಶ ತಪಶೆಟ್ಟಿ ಇಂದು ಬೆಳಗಾವಿ ಜಿಲ್ಲೆಯ ಬೆಳವಡಿ ಹತ್ತಿರ ಇರುವ ರೆಸಾರ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಎಸ್.ಜಿ.ನಂಜಯ್ಯನಮಠ, ಮುಖಂಡರಾದ, ಅಜಯಕುಮಾರ ಸರನಾಯಕ, ಎಚ್.ವೈ.ಮೇಟಿ, ಮುರಗೇಶ ಕಡ್ಲಿಮಟ್ಟಿ, ಹೊಳಬಸು ಶೆಟ್ಟರ ಇತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!