ಹೊಸದಿಗಂತ ಡಿಜಿಟಲ್ ಡೆಸ್ಕ್:
ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಯ ಮೆರವಣಿಗೆ ಬೆಳ್ಳಾರೆ ತಲುಪಿದೆ.
ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಸಲಾಗಿದೆ. ಪೊಲೀಸರಿಗೆ ಹಾಗೂ ಕಾರ್ಯಕರ್ತರಿಗೆ ಗಾಯಗಳಾಗಿವೆ.
ಸಂಸದ ನಳಿನ್ , ಸಚಿವ ಸುನೀಲ್ ಕುಮಾರ್ ಹಾಗೂ ಪ್ರಭಾಕರ ಭಟ್ ಕಾರಿನಲ್ಲಿ ಕೂತಾಗ ಆ ಕಾರನ್ನು ಘೇರಾವ್ ಹಾಕಿದ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ಳಾರೆಯಲ್ಲಿ ಮೃತದೇಹದ ಅಂತಿಮದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿದೆ.
ಇಂದು ಪುತ್ತೂರು ಸುಳ್ಯ ಕಡಬ ಬಂದ್ ಗೆ ಕರೆ ನೀಡಿದ್ದು, ಸಂಪೂರ್ಣ ಬಂದ್ ಆಗಿದೆ. ಮೂರು ತಾಲೂಕಿನಲ್ಲೂ ಸೆಕ್ಷನ್ ಜಾರಿ ಮಾಡಿದ್ದು, ಪೊಲೀಸರರಿಂದ ಬಿಗಿ ಬಂದೊಬಸ್ತ್ ಏರ್ಪಾಡು ಮಾಡಲಾಗಿದೆ.