ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾವೂರು, ಬೆಳ್ಳಾರೆಯ ಮತ್ತೆ ಇಬ್ಬರು ಆರೋಪಿಗಳ ಬಂಧನ

ಹೊಸದಿಗಂತ ವರದಿ ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಸುಳ್ಯ ತಾಲೂಕಿನ ನಾವೂರು ಬಳಿಯ ನಿವಾಸಿ ಆಬಿದ್ ( 22 ) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ ( 28 ) ಬಂಧಿತರು. ಇವರಿಬ್ಬರ ಬಂಧನದೊಂದಿಗೆ ಬಂಧಿತರ ಸಂಖ್ಯೆ ಆರಕ್ಕೇರಿದೆ.
ಜಿಲ್ಲೆ ಮಾತ್ರವಲ್ಲ ರಾಜ್ಯವನ್ನೇ ಬೆಚ್ವಿ ಬೀಳಿಸಿದ್ದ ಪ್ರವೀಣ್ ಹತ್ಯೆ ಪ್ರಕರಣದಿಂದಾಗಿ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ತಲೆದೋರಿತ್ತು. ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ಇದೀಗ ಮತ್ತಿಬ್ಬರನ್ನು ಬಂಧಿಸುವುದರೊಂದಿಗೆ ಪ್ರಕರಣ ಹೊಸ ಆಯಾಮ ಪಡೆದುಕೊಂಡಿದೆ. ಬಂಧಿತರ ವಿಚಾರಣೆ ಬಳಿಕ ಮತ್ತಷ್ಟು ವಿಷಯಗಳು ಹೊರಬರಲಿವೆ.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಎಲ್ಲಾ ಆರೋಪಿಗಳ ಮಾಹಿತಿ ದೊರೆತಿದ್ದು,ತಲೆಮರೆಸಿಕೊಂಡವರಿಗಾಹಿ,ಅವರಿಗಾಗಿ ಶೋಧ ನಡೆಯುತ್ತಿದೆ.
ಇದುವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ಬ ಸೋನಾವಣೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!