ಪ್ರವೀಣ್‌ ನೆಟ್ಟಾರು ಹತ್ಯೆ: ಕೇರಳಕ್ಕೆ ವಿಸ್ತರಿಸಿದ ಹುಡುಕಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಆರೋಪಿಗಳ ಬಂಧನಕ್ಕಾಗಿ ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ನಡೆಸುತ್ತಿರುವ ಕಾರ್ಯಾಚರಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸಮಗ್ರ ಮಾಹಿತಿ ನೀಡಿದರು.

ಸಿಎಂ ಗೃಹ ಕಚೇರಿ ಕೃಷ್ಣಾಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಭೇಟಿ ನೀಡಿ ಸಿಎಂ ಜೊತೆ ಮಾತುಕತೆ ನಡೆಸಿದರು.

ಪ್ರವೀಣ್ ಹತ್ಯೆ ಸಂಬಂಧ ಆಗುತ್ತಿರುವ ಬೆಳವಣಿಗೆ ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿದರು.

ಮಂಗಳೂರು ಎಸ್ಪಿ ನೀಡಿರುವ ಮಾಹಿತಿ, ಕಾಸರಗೋಡು ಪೊಲೀಸರ ಸಹಕಾರ ಪಡೆದುಕೊಂಡಿರುವುದು ಸೇರಿದಂತೆ ಕರ್ನಾಟಕ, ಕೇರಳ ಎರಡು ರಾಜ್ಯದ ಗಡಿ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಕಾರ್ಯಾಚರಣೆ ಕುರಿತು ಎಲ್ಲ ವಿವರವನ್ನು ಸಿಎಂಗೆ ವಿವರಿಸಿದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಜೊತೆಗೆ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲು ಎಲ್ಲ ಕ್ರಮ ಕೈಗೊಳ್ಳುವಂತೆ ಡಿಜಿಪಿ ಪ್ರವೀಣ್ ಸೂದ್​ಗೆ ಸಿಎಂ ಸೂಚನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!