ಪ್ರವೀಣ್ ನೆಟ್ಟಾರು ಹತ್ಯೆ: ಉಡುಪಿಯಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ

ಹೊಸದಿಗಂತ ವರದಿ, ಉಡುಪಿ:

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆಯ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ, ಉಡುಪಿ ಮಲ್ಪೆ ಭಾಗದ ತೆಂಕನಿಡಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯಪ್ರಕಾಶ್ ಬೈಲಕರೆ ಮತ್ತು 50ಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿಯಲ್ಲಿ ಜವಾಬ್ದಾರಿಯಿಂದ ದುಡಿದಿದ್ದೇವೆ. ಆದರೇ ಈಗ ಕಾರ್ಯಕರ್ತರಿಗೆ ರಕ್ಷಣೆಯ ಭರವಸೆಯನ್ನು ಕಳೆದುಕೊಂಡು ನೋವಿನಿಂದ ರಾಜೀನಾಮೆ ನೀಡುತ್ತೇವೆ ಎಂದು ತಿಳಿಸಲಾಗಿದೆ.
ಬಿಜೆಪಿಯ ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ನಿಟ್ಟೆ ಸುದೀಪ್ ಶೆಟ್ಟಿಯೂ ತಮ್ಮ ಜವಾಬ್ದಾರಿ ಗೆ ರಾಜಿನಾಮೆ ನೀಡಿದ್ದಾರೆ.
ಈ ಹಿಂದೆ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 22ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಕೊಲೆಯಾದಾಗ ನಾವು ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಅವುಗಳನ್ನು ಖಂಡಿಸಿದ್ದೇವೆ. ಈಗ ನಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ನಡೆಯುತ್ತಿರುವ ಕೊಲೆಗಳ ಸಂದರ್ಭದಲ್ಲಿ ನಮ್ಮ ನಡೆ, ನಿಲುವನ್ನು ಸಮರ್ಥಿಸಲು ಸಾಧ್ಯವಿಲ್ಲ, ಆದ್ದರಿಂದ ರಾಜೀನಾಮೆ ನೀಡುವುದಾಗಿ ಸುದೀಪ್ ಶೆಟ್ಟಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!