ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಈಗಾಗಲೇ 10 ಮಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇದೀಗ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಬೆಳ್ಳಾರೆ ನಗರ ಠಾಣೆಗೆ ಆಗಮಿಸಿದ್ದಾರೆ.
ಈಗಾಗಲೇ ಅವರು ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಮತ್ತು ದಕ್ಷಿಣ ಕನ್ನಡ ಎಸ್ ಪಿ ಸೋನಾವಣೆಯವರಿಂದ ಮಾಹಿತಿ ಪಡೆದಿದ್ದಾರೆ.ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳ್ಳಾರೆ ನಗರ ಠಾಣೆಗೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ಜೊತೆ ದ.ಕ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ.