ಹೊಸದಿಗಂತ ವರದಿ, ಸುಳ್ಯ:
ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಮುಂದಾಳು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ ರೂ. 11 ಲಕ್ಷ ಮೊತ್ತದ ನೆರವು ನೀಡಿರುವುದಾಗಿ ತಿಳಿದುಬಂದಿದೆ.
ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ ಮಾಹಿತಿಯನ್ನು ಪಡೆದುಕೊಂಡು ಬಳಿಕ ರೂ. 11 ಲಕ್ಷ ಮೊತ್ತವನ್ನು ಪ್ರವೀಣ್ ಪತ್ನಿ ನೂತನಾ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದಾಗಿ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮನೀಶ್ ಮುಂದ್ರಾ ಹಲವಾರು ಬಾಲಿವುಡ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. 2017ರಲ್ಲಿ ಅವರ ನಿರ್ಮಾಣದ ‘ಧನಕ್’ ರಾಷ್ಟ್ರ ಪ್ರಶಸ್ತಿ ಗಳಿಸಿತ್ತು. ಅವರ ‘ನ್ಯೂಟನ್’ ಚಿತ್ರ ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದಿತ್ತು. ಅಸಹಾಯಕರಿಗೆ ನೆರವಾಗುವ ಮುಂದ್ರಾ, ಕೊರೊನಾ ಸಂದರ್ಭದಲ್ಲಿ ಉಚಿತ ಪಿಪಿಇ ಕಿಟ್ಗಳನ್ನು ಒದಗಿಸಿದ್ದರು.