ಹೊಸದಿಗಂತ ಡಿಜಿಟಲ್ ಡೆಸ್ಕ್
ಕರಾವಳಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಅವರ ಕನಸಿನ ಮನೆಯ ಗೃಹಪ್ರವೇಶ (Hosewarming) ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಮತ್ತು ಸಾವಿರರು ಕಾರ್ಯಕರ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.
ಈ ವೇಳೆ ಮನೆ ಮುಂದೆ ನಿರ್ಮಾಣ ಮಾಡಲಾದ ಪ್ರವೀಣ್ ಸ್ಮಾರಕವನ್ನು ಲೋಕಾರ್ಪಣೆ ಮಾಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿರುವ ಪ್ರವೀಣ್ ಹಳೆ ಮನೆಯ ಆವರಣದಲ್ಲೇ ಬಿಜೆಪಿ ವತಿಯಿಂದ ಹೊಸ ಮನೆ ನಿರ್ಮಾಣ ಮಾಡಲಾಗಿದೆ. ನೂತನ ನಿವಾಸಕ್ಕೆ ಪ್ರವೀಣ್ ಹೆಸರಿಡಲಾಗಿದ್ದು, ಮನೆ ಮುಂದೆ ಸ್ಥಾಪಿಸಿರುವ ಪ್ರವೀಣ್ ಸ್ಮಾರಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೋಕಾರ್ಪಣೆ ಮಾಡಿದರು. ಇಂದು ಬೆಳ್ಳಿಗೆ ೮.೪೫ ಮುಹೂರ್ತದಲ್ಲಿ ಗೃಹಪ್ರವೇಶ ನಡೆಯಿತು.
2022 ಜುಲೈ 26 ರಂದು ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೀಡಾಗಿದ್ದರು . ಈ ಸಂದರ್ಭದಲ್ಲಿ ಪ್ರವೀಣ್ ಕನಸಿನಂತೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ ನಿರ್ಮಾಣವಾಗಿದೆ. 70 ಲಕ್ಷ ವೆಚ್ಚದಲ್ಲಿ, 2,800 ಚದರಡಿ ವಿಸ್ತೀರ್ಣದಲ್ಲಿ ಮನೆ ನಿರ್ಮಾಣ ಮಾಡಲಾಗಿದೆ.