ಹೊಸದಿಗಂತ ವರದಿ, ಕಲಬುರಗಿ:
ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಯುವಕ ಪ್ರವೀಣ್ ಹತ್ಯೆಯಾಗಿರುವುದು ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದು ಕಾರ್ಯಕರ್ತರ ನಾಲ್ಕನೇ ಕೊಲೆ ಇದಾಗಿದೆ.
ಸರ್ಕಾರ ಏನ್ಮಾಡತ್ತಿದೆ, ಗೃಹ ಸಚಿವರು ಏನ್ಮಾಡ್ತಿದ್ದಾರೆ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.
ಬಿಜೆಪಿ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆ ಹುಸಿಯಾಗುತ್ತಿದೆ. ಹಿಂದು ಯುವಕರ ರಕ್ಷಣೆ ಮಾಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ದುಷ್ಟ ಶಕ್ತಿಗಳನ್ನು ಮಟ್ಡ ಹಾಕಲು ದಿಟ್ಟ ಕ್ರಮ ಕೈಗೊಳ್ಳಬೇಕು. ಬಾಯಿ ಮಾತನಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳತ್ತೆನೆ ಅಂತಾ ಹೇಳುವ ಉಡಾಫೆ ಹೇಳಿಕೆ ಬಿಡಬೇಕು. ಕೊಲೆಗಾರರನ್ನು ಗುಂಡಿಟ್ಟು ಕೊಲೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಯಾವ ಭಾಗದಲ್ಲು ಹಿಂದು ಕಾರ್ಯಕರ್ತರು ಸುರಕ್ಷಿತವಾಗಿಲ್ಲ. ಯಾರ್ಯಾರಿಗೆ ಬೇದರಿಕೆ ಇದೆ ಅವರಿಗೆ ಸರ್ಕಾರ ಭದ್ರತೆ ಕೊಡಬೇಕು. ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿಗೆ ಎಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ಕೊಡಬೇಕು ಎಂದು ಒತ್ತಾಯಿಸಿದರು.