ಹೊಸದಿಗಂತ ವರದಿ, ಮುಂಡಗೋಡ:
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರು ಹಿಂದೂ ಯುವಕರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತು ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವೀಣಾ ಬಸವರಾಜ್ ಓಶಿಮಠ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇತ್ತಿಚಿನ ದಿನಗಳಲ್ಲಿ ಹರೆಯದ ಬಡ ಯುವಕರ ಮೇಲೆ ಮಾರಣಾಂತಿಕೆ ಹಲ್ಲೆ ಮಾಡಿ ಕೊಲೆ ಮಾಡಲಾಗುತ್ತಿದೆ. ಮುದೊಂದು ದಿನ ಮಹಿಳೆಯರಿಗೂ ಇಂತಹ ಪರಿಸ್ಥಿತಿ ಬರಬಹುದು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಕೆಲ ಜಿಲ್ಲೆಯಲ್ಲಿ ಬಿಜೆಪಿಯ ಯುವ ಮೊರ್ಚಾ ರಾಜೀನಾಮೆ ನೀಡುತ್ತಿದ್ದಾರೆ. ಹೀಗಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾಸ ವಿತರಕ ಸಂಘದ ಅಧ್ಯಕ್ಷ ಬಸವರಾಜ್ ಓಶಿಮಠ ದಲಿತ ಮುಖಂಡ ಚಿದಾನಂದ ಹರಿಜನ ಉಪಸ್ಥಿತರಿದ್ದರು.