ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಕೇರಳದಲ್ಲಿ ರಾಜಕೀಯ ಚಟುವಟಿಕೆಗಳು ಕಾವು ಪಡೆದಿವೆ.
ಗೆಲುವಿನ ವಿಶ್ವಾಸದಲ್ಲಿರುವ ವಿವಿಧ ಪಕ್ಷಗಳ ಕಾರ್ಯಕರ್ತರು ಈಗಾಗಲೇ ವಿಜಯೋತ್ಸವದ ಸಿದ್ಧತೆಯಲ್ಲಿ ತೊಡಗಿದ್ದು, ರಾಜ್ಯದ ಹಲವೆಡೆ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.
ಮಲಪ್ಪುರಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಂಗ್ರೆಸ್ ಹಾಗೂ ಯುಡಿಎಫ್ ಬೆಂಬಲಿಗರು ಸಾವಿರಾರು ಮಂದಿಗೆ ಬಿರಿಯಾನಿ ವಿತರಿಸಲು ಸಿದ್ಧತೆ ನಡೆಸಿದ್ದಾರೆ. ದೊಡ್ಡ ಮಟ್ಟದಲ್ಲಿ ಅಡುಗೆ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕರ್ತರಿಗಾಗಿ ವಿಶೇಷ ಕಾರ್ಯಕ್ರಮಗಳ ಆಯೋಜನೆಯೂ ನಡೆಯುತ್ತಿದೆ. ಹಲವು ವರ್ಷಗಳ ಬಳಿಕ ರಾಜಕೀಯ ಬದಲಾವಣೆಯ ನಿರೀಕ್ಷೆಯಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಸಜ್ಜಾಗಿದ್ದಾರೆ.
ಇದನ್ನೂ ಓದಿ:
ಇನ್ನೊಂದೆಡೆ, ಬಿಜೆಪಿ ಕಾರ್ಯಕರ್ತರೂ ಸಂಭ್ರಮಾಚರಣೆಗೆ ಮುಂಚಿತ ಸಿದ್ಧತೆ ಆರಂಭಿಸಿದ್ದಾರೆ. ಸಿಹಿ ಹಂಚಲು ಲಡ್ಡು ತಯಾರಿಸುವ ಕಾರ್ಯ ನಡೆಯುತ್ತಿದ್ದು, ಪಕ್ಷ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ.
ಅಧಿಕೃತ ಫಲಿತಾಂಶ ಹೊರಬೀಳುವ ಮುನ್ನವೇ ಕೇರಳದ ರಾಜಕೀಯ ಅಂಗಳದಲ್ಲಿ ಹಬ್ಬದ ಸಂಭ್ರಮ ಕಾಣಿಸುತ್ತಿದ್ದು, ನಾಳೆಯ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.



